ರಾಜ್ಯ ನಾಯಕರಿಗೆ ಏಕಾಂಗಿಯಾಗಿ ಚುನಾವಣೆ ಎದುರಿಸುವ ಶಕ್ತಿಯಿಲ್ಲ: ಬಿಜೆಪಿ ಶಾಸಕ ಯತ್ನಾಳ್

Prasthutha|

ರಾಯಚೂರು: 2023ರ ವಿಧಾನಸಭಾ ಚುನಾವಣೆಯನ್ನು ರಾಜ್ಯದ ಯಾವುದೇ ನಾಯಕರಿಗೆ ಏಕಾಂಗಿಯಾಗಿ ಎದುರಿಸುವ ಶಕ್ತಿಯಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೆಸರಿನ ಮೇಲೆ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

- Advertisement -

ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಮಂತ್ರಿ ಮಂಡಲ ಪುನಾರಚನೆ ಅಗತ್ಯವಿಲ್ಲ. ವಿಧಾನಸಭಾ ಚುನಾವಣೆಗೆ ಕೇವಲ ಆರು ತಿಂಗಳು ಮಾತ್ರವೇ ಬಾಕಿಯಿದೆ. ಹೀಗಿರುವಾಗ ಸಂಪುಟ ವಿಸ್ತರಣೆ ಮಾಡಿದರೆ ಯಾವುದೇ ಉಪಯೋಗವಿಲ್ಲ ಎಂದು ತಿಳಿಸಿದರು.

Join Whatsapp
Exit mobile version