ರಾಜ್ಯ ಸಾರಿಗೆ ಸಂಸ್ಥೆ ಬಸ್ – ಆಟೋ ಡಿಕ್ಕಿ: 9 ಮಂದಿಯ ದಾರುಣ ಸಾವು

Prasthutha|

ಕೊಲ್ಕತ್ತಾ : ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ರಾಮ್ ಪುರಹತ್ ನ ಮಲ್ಲರ್ ಪುರ ಬಳಿ ಈ ಅಪಘಾತ ಸಂಭವಿಸಿದೆ.

ಜನರಿಂದ ತುಂಬಿದ್ದ ಆಟೋ ಎದುರಿಗೆ ಬರುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 8 ಮಹಿಳಾ ಕೃಷಿ ಕಾರ್ಮಿಕರು ಹಾಗೂ ಆಟೋ ಚಾಲಕ ಮೃತಪಟ್ಟಿರುವುದಾಗಿ ಬಿರ್ ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಹೇಳಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಸಂಬಂಧಿಕರಿಗೆ 2 ಲಕ್ಷ ಹಾಗೂ ಗಾಯಾಗಳುಗಳಿಗೆ 50 ಸಾವಿರ  ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Join Whatsapp