ಲಿಂಗಾಯತರ ವಿರುದ್ಧ ಹೇಳಿಕೆ ಆರೋಪ| ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ

Prasthutha|

ಬೆಂಗಳೂರು: ಲಿಂಗಾಯತರ ವಿರುದ್ಧ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಇದೀಗ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೂಡ ಹೂಡಲಾಗಿದೆ.

- Advertisement -

ಶಂಕರ್ ಶೇಟ್ ಎಂಬುವರು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಇಂದು (ಏಪ್ರಿಲ್ 25) ಖಾಸಗಿ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಕೋರ್ಟ್ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.

ಲಿಂಗಾಯುತ ಮುಖ್ಯಮಂತ್ರಿ ಭ್ರಷ್ಟಾಚಾರ ಎಸಗಿ, ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸದ್ಯ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಹೇಳಿಕೆ ನೀಡಿದ ಬೆನ್ನಲ್ಲೇ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕವು ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಮಾನನಷ್ಟ ಮೊಕದ್ದಮೆ ಕೂಡ ದಾಖಲಾಗಿದೆ.

Join Whatsapp