RSS ಕುರಿತು ಹೇಳಿಕೆ: ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

Prasthutha|

ನವದೆಹಲಿ: ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಆರ್ ​ಎಸ್ ​ಎಸ್​ ಬಗ್ಗೆ ಮಾತನಾಡಿದ್ದ ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನ ನಷ್ಟ ಮೊಕದ್ದಮೆ ದಾಖಲಾಗಿದೆ.

- Advertisement -

ಲಾಯರ್​ ಸಂತೋಷ್​ ದುಬೆ ಎಂಬುವವರು ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದವರು.

ಲೀಗಲ್​ ನೋಟೀಸ್​ ಸ್ವೀಕರಿಸಿದ ಏಳು ದಿನಗಳ ಒಳಗಾಗಿ ಸಾರ್ವಜನಿಕವಾಗಿ ಜಾವೇದ್​ ಅಖ್ತರ್​ ಕ್ಷಮೆ ಕೇಳಬೇಕು ಮತ್ತು ತಮ್ಮ ಎಲ್ಲ ಹೇಳಿಕೆಗಳನ್ನು ವಾಪಸ್​ ಪಡೆಯಬೇಕು ಎಂದು ಸಂತೋಷ್​ ದುಬೆ ಪಟ್ಟು ಹಿಡಿದಿದ್ದಾರೆ.

- Advertisement -

 ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್ ​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ ಎಸ್ ​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಎಂದು ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್ ​ಎಸ್ ಎಸ್ ​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.

ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ ಎಸ್ ​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.

Join Whatsapp