ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ

Prasthutha|

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ. ಇದು ಸಮಾಜ ವಿರೋಧಿಗಳ ಕೃತ್ಯ ಎಂದು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಸರ್ವೇಶ್ ಯಾದವ್ ಹೇಳಿದ್ದಾರೆ.

- Advertisement -

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪ್ರದೇಶದ ದಲಿತ ಸಮುದಾಯ ಪ್ರತಿಭಟನೆಯನ್ನು ನಡೆಸಿದೆ. ಶೀಘ್ರದಲ್ಲೇ ಹೊಸ ಪ್ರತಿಮೆ ನಿರ್ಮಿಸಿ ಕೊಡುವುದಾಗಿ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ ನಂತರ ಪ್ರತಿಭಟನೆ ಕೊನೆಗೊಳಿಸಲಾಯಿತು. ಅಂಬೇಡ್ಕರ್ ಸಮಿತಿ ಅಧ್ಯಕ್ಷ ಸುನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಭೀಮ್‌ಪುರ ಪೊಲೀಸರು ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧೀಕ್ಷಕ ಸಂಜಯ್ ಯಾದವ್ ತಿಳಿಸಿದ್ದಾರೆ.

Join Whatsapp