ಹಾವೇರಿ: ಮುಸ್ಲಿಮರ ಮೇಲೆ ದೌರ್ಜನ್ಯ| 15 ಮಂದಿ ಸಂಘಪರಿವಾರದ ಕಾರ್ಯಕರ್ತರ ಬಂಧನ

Prasthutha|

ಹಾವೇರಿ: ಮುಸ್ಲಿಮರ ಮನೆ, ಮಸೀದಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಜಿಲ್ಲೆಯ ರಟ್ಟೀಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಂಗಳವಾರ ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ರ್ಯಾಲಿಯ ವೇಳೆ ಸುಮಾರು 150 ಜನರು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಸೀದಿಯ ಸಮೀಪಕ್ಕೆ ತೆರಳಿ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದರು.

ಈ ಕುರಿತು ಮಾಹಿತಿ ನೀಡಿದ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ್,  ಸುಮಾರು 8–10 ಮನೆಗಳು ಹಾಗೂ ಎರಡು ವಾಹನಗಳಿಗೆ ಹಾನಿಯಾಗಿದೆ. ತನಿಖೆಗಾಗಿ 15 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ, ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿಸಿದರು.



Join Whatsapp