ಮಂಗಳೂರು: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ತೂರಾಟ, ತೀವ್ರಗೊಂಡ ತನಿಖೆ

Prasthutha|

- Advertisement -

ಮಂಗಳೂರು: ನಗರದ ಹೊರವಲಯದ ಕಾಟಿಪಳ್ಳ 3 ನೇ ಬ್ಲಾಕಿನ ಬದ್ರಿಯಾ ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬೈಕ್ ನಲ್ಲಿ ಆಗಮಿಸಿ ಕಲ್ಲು ತೂರಾಟ ನಡೆಸಿದೆ.

ಪರಿಣಾಮ, ಮಸೀದಿಯ ಗಾಜು ಪುಡಿಯಾಗಿದೆ.

- Advertisement -

ಸುರತ್ಕಲ್ ಠಾಣಾ ಪೊಲೀಸರು ಬಂದೋಬಸ್ತು ಒದಗಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

ಈದ್ ಮಿಲಾದ್ ಗಾಗಿ ಮಸೀದಿಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಈ ನಡುವೆ ಭಾನುವಾರ ತಡರಾತ್ರಿ 10.30 ಗಂಟೆ ವೇಳೆಗೆ 2 ಬೈಕ್ ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು, ಸುರತ್ಕಲ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.



Join Whatsapp