ಲೋಕಸಭೆ ಚುನಾವಣೆಗೆ ಕಾರ್ಯತಂತ್ರ; 50 ನಾಯಕರು ದೆಹಲಿಗೆ ಪ್ರಯಾಣ: ಡಿ.ಕೆ ಶಿವಕುಮಾರ್

Prasthutha|

ಬೆಂಗಳೂರು: 2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ರಾಜ್ಯದ 50 ಕಾಂಗ್ರೆಸ್ ನಾಯಕರು ಮತ್ತು ಸಚಿವರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -


ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.


ದೆಹಲಿಗೆ ತೆರಳುವ ಮೊದಲು ಮಾತನಾಡಿದ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಯೋಜನೆಗಳ ಬಗ್ಗೆ ಚರ್ಚಿಸಲು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡುವುದಾಗಿ ತಿಳಿಸಿದರು.

- Advertisement -


ನಾಳೆ ದೆಹಲಿಯಲ್ಲಿ ಸಭೆ ಇದೆ, ಇಂದು ನಾನು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ. ಪಕ್ಷದ ಕೆಲಸ, ಸರ್ಕಾರಿ ಕೆಲಸವೂ ಇದೆ. ಹಾಗಾಗಿ ನಾನು ದೆಹಲಿಗೆ ಹೋಗುತ್ತಿದ್ದೇನೆ ಎಂದು ಶಿವಕುಮಾರ್ ಹೇಳಿದರು.


ದೆಹಲಿಯಲ್ಲಿ ರಾಜ್ಯ ಸಚಿವರು ಮತ್ತು ನಾಯಕರ ಜೊತೆಗಿನ ಪಕ್ಷದ ಸಭೆಯಲ್ಲಿ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಚುನಾವಣೆಗೆ ಮುನ್ನ ಕಾಂಗ್ರೆಸ್ ಹಿತದೃಷ್ಟಿಯಿಂದ ಏನು ಮಾಡಬೇಕೆಂಬುದರ ಬಗ್ಗೆ ಚರ್ಚಿಸಿ ಕಾರ್ಯತಂತ್ರ ರೂಪಿಸುವುದಾಗಿ ಹೇಳಿದರು.


ಸಚಿವರು ಹಾಗೂ ಕೆಲ ಶಾಸಕರು ಮಾತ್ರವಲ್ಲದೆ ಸುಮಾರು 8-10 ಮಂದಿ ಶಾಸಕರಲ್ಲದ ಹಿರಿಯ ನಾಯಕರನ್ನು ಸಭೆಗೆ ಕರೆಯಲಾಗಿದೆ. ಅಲ್ಲದೆ, ಸಂಸದರಿಗೂ ಆಹ್ವಾನ ನೀಡಲಾಗಿದೆ.ಒಟ್ಟು ಸುಮಾರು 50 ಜನರು, ಮತ್ತು ಅವರು ಮೂರು ತಂಡಗಳಲ್ಲಿ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.

Join Whatsapp