ನೀಟ್ ಹಗರಣದಲ್ಲಿ ಭಾಗಿಯಾದವರಿಗೆ ಕಠಿಣ ಕ್ರಮ: ಧರ್ಮೇಂದ್ರ ಪ್ರಧಾನ್

Prasthutha|

ನವದೆಹಲಿ: ನೀಟ್ ಹಗರಣದಲ್ಲಿ ಭಾಗಿಯಾದ ಪ್ರತಿಯೊಬ್ಬರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

- Advertisement -


ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ರಾಷ್ಟ್ರಪತಿ ಭಾಷಣದಲ್ಲೂ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಸಂಸತ್ ನಲ್ಲಿ ಈ ಕುರಿತು ಪ್ರತ್ಯೇಕ ಚರ್ಚೆ ಅಗತ್ಯವಿಲ್ಲ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ವಿಪಕ್ಷಗಳು ಈ ವಿಷಯವನ್ನು ಪ್ರಸ್ತಾಪಿಸಬಹುದು. ಸರ್ಕಾರ ಉತ್ತರ ನೀಡಲು ಸಮರ್ಥವಾಗಿದೆ ಎಂದರು. ನೀಟ್ ಹಗರಣದ ಬಗ್ಗೆ ಸಿಬಿಐ ತನಿಖೆ ಪ್ರಗತಿಯಲ್ಲಿದ್ದು, ಪರೀಕ್ಷಾ ಸುಧಾರಣೆಗಳಿಗಾಗಿ ಇಸ್ರೋ ಮಾಜಿ ಅಧ್ಯಕ್ಷ ಡಾ. ರಾಧಾಕೃಷ್ಣನ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

Join Whatsapp