ವಿಎಚ್ ಪಿಯಿಂದ ನಾಳೆ ಶ್ರೀರಂಗಪಟ್ಟಣ ಚಲೋ; ಕಾನೂನು ಕೈಗೆತ್ತಿಕೊಂಡರೆ ನಿರ್ದಾಕ್ಷ್ಯಿಣ್ಯ ಕ್ರಮ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ವಿಶ್ವ ಹಿಂದೂ ಪರಿಷತ್ ನಾಳೆ ಕರೆಕೊಟ್ಟಿರುವ ಶ್ರೀರಂಗ ಪಟ್ಟಣ ಚಲೋ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸರು ಎಲ್ಲಾ ಮುನ್ನೆಚ್ಚರಿಕೆ ಹಾಗೂ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -


ಯಾರೇ ಆದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳಲು ಅವಕಾಶವಿಲ್ಲ. ಶಾಂತಿ ನೆಮ್ಮದಿಗೆ ಭಂಗ ತರುವ ಯಾವುದೇ ಪ್ರಯತ್ನವನ್ನು ಪೊಲೀಸರು, ನಿರ್ದಾಕ್ಷಿಣ್ಯವಾಗಿ ಹತ್ತಿಕ್ಕಬೇಕಾಗಿ ಸೂಚಿಸಲಾಗಿದೆ. ಯಾವುದೇ ಸಂಘಟನೆ ತಮ್ಮ ಹಕ್ಕೊತ್ತಾಯ ವನ್ನು ಶಾಂತಿಯುತವಾಗಿ, ಪ್ರಜಾಸತ್ತಾತ್ಮಕವಾಗಿ ಹಾಗೂ ನ್ಯಾಯಯುತವಾಗಿ ಮಂಡಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Join Whatsapp