ಶಾಲೆಗೆ 5 ನಿಮಿಷ ತಡವಾಗಿ ಬಂದ ವಿದ್ಯಾರ್ಥಿ: ಎರಡು ಕಾಲು ಮುರಿದ ಪ್ರಾಂಶುಪಾಲ

Prasthutha|

ನವದೆಹಲಿ: ಶಾಲೆಗೆ 5 ನಿಮಿಷ ತಡವಾಗಿ ಬಂದ ವಿದ್ಯಾರ್ಥಿಗೆ ಪ್ರಾಂಶುಪಾಲ ಕ್ರೂರವಾಗಿ ಥಳಿಸಿ ಎರಡೂ ಕಾಲುಗಳ ಮೂಳೆಗಳನ್ನು ಮುರಿದಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ.

- Advertisement -

ಶಾಮ್ಲಿಯ ಆದರ್ಶ್ ಮಂಡಿ ಪ್ರದೇಶದ ಮುಂಡೇತ್ ಗ್ರಾಮದಲ್ಲಿ ಈ ಪ್ರಕರಣ ನಡೆದಿದ್ದು, ತಡವಾಗಿ ಬಂದಿದ್ದಕ್ಕಾಗಿ ಜೈ ಜವಾನ್ ಜೈ ಕಿಸಾನ್ ಇಂಟರ್ ಕಾಲೇಜಿನ ಪ್ರಾಂಶುಪಾಲರು ದೇವಲ್ ಎಂಬ 8 ನೇ ತರಗತಿಯ ವಿದ್ಯಾರ್ಥಿಯನ್ನು ದೊಣ್ಣೆಗಳಿಂದ ಥಳಿಸಿದ್ದಾರೆ. ಇದರಿಂದ ದೇವಲ್ ನ ಎರಡೂ ಕಾಲುಗಳ ಮೂಳೆಗಳು ಮುರಿದಿವೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ತಂದೆ ಪ್ರಾಂಶುಪಾಲರ ವಿರುದ್ಧ ಆದರ್ಶ ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಅಧಿಕಾರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

- Advertisement -

ಈ ಬಗ್ಗೆ ತನಿಖೆ ನಡೆಸಲು ವಿಚಾರಣಾ ಸಮಿತಿಯನ್ನು ರಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp