ಶಿಕ್ಷಕಿ ಬೈದಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಬೆಂಗಳೂರು: ಶಿಕ್ಷಕಿ ಬೈದಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಾಣಸವಾಡಿಯ ಪಿಳ್ಳಾರೆಡ್ಡಿ ನಗರದಲ್ಲಿ ನಡೆದಿದೆ.

- Advertisement -

ಬಾಣಸವಾಡಿಯ ಮರಿಯಮ್ ಸ್ಕೂಲ್ ನಲ್ಲಿ 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಅಮೃತಾ ಆತ್ಮಹತ್ಯೆ ಮಾಡಿಕೊಂಡವರು.

ಶಿಕ್ಷಕಿಯು ಎಲ್ಲಾ ವಿದ್ಯಾರ್ಥಿಗಳ ಮುಂದೆ ಬೈದಿದ್ದಾರೆಂದು ಮನನೊಂದು ನಿನ್ನೆ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

- Advertisement -

ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಅದರಲ್ಲಿ “Mom am sorry am not able to forget in school I cannot live with this guilty” ಎಂದು ಕೊನೆಯಲ್ಲಿ “I Love u mom, Daddy” ಅಂತ ಬರೆದಿದ್ದಾಳೆ.

ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp