ವಿದೇಶದಲ್ಲಿ ವ್ಯಾಸಂಗದ ಕನಸು ಭಗ್ನ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

Prasthutha|

ಬೆಂಗಳೂರು: ವಿದೇಶದಲ್ಲಿ ವ್ಯಾಸಂಗ ಮಾಡಬೇಕೆಂಬ ಕನಸು ನನಸಾಗದ ಹಿನ್ನೆಲೆಯಲ್ಲಿ ನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನೆಲಮಂಗಲದ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಹುಬ್ಬಳ್ಳಿ ಮೂಲದ ಆದಿತ್ಯ ಸಂಕಣ್ಣ (18) ಆತ್ಮಹತ್ಯೆಗೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ. ಆಚಾರ್ಯ ಕಾಲೇಜಿನಲ್ಲಿ ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ 3 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ. ಈತ ವಿದೇಶದಲ್ಲಿ ವ್ಯಾಸಂಗ ಮಾಡಬೇಕೆಂಬ ಕನಸು ಕಟ್ಟಿಕೊಂಡಿದ್ದ. ಆದರೆ ಹೆಚ್ಚು ಅಂಕಗಳಿಸಲು ಸಾಧ್ಯವಾಗದೇ  ನೊಂದು ಭರವಸೆ ಕಳೆದುಕೊಂಡು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ

ಈ ಕುರಿತು ಡೆತ್ ನೋಟ್ ಸಹ ಬರೆದಿಟ್ಟಿದ್ದಾನೆ ಎಂದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಹಚ್ಚಿನ ತನಿಖೆ ನಡೆಸುತ್ತಿದ್ದಾರೆ.

Join Whatsapp