ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಹಾಸನ: ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

- Advertisement -


ಮುಹಮ್ಮದ್ ಕೈಫ್ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.


ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಮುಹಮ್ಮದ್ ಕೈಫ್ 9ನೇ ತರಗತಿ ಓದುತ್ತಿದ್ದ. ಕೈಫ್ ಹಲವಾರು ಬಾರಿ ಹಾಸ್ಟೆಲ್ ನಿಂದ ಮನೆಗೆ ವಾಪಸ್ ಬಂದಿದ್ದ. ಆದರೂ ಆತನ ಪೋಷಕರು ವಿದ್ಯಾರ್ಥಿಯನ್ನು ಪುನಃ ಹಾಸ್ಟೆಲ್ ಗೆ ಬಿಟ್ಟು ಬಂದಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.



Join Whatsapp