Home ಕರಾವಳಿ ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು

ಉಡುಪಿ: ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದ ತಲ್ಲೂರಿನಲ್ಲಿ ನಡೆದಿದೆ.


ತಲ್ಲೂರು ನಿವಾಸಿ ಅರುಣ್ -ಭಾರತಿ ದಂಪತಿಯ ಪುತ್ರಿ ಅನುಶ್ರೀ (13) ಮೃತಪಟ್ಟ ಬಾಲಕಿ. 8ನೇ ತರಗತಿ ವಿದ್ಯಾರ್ಥಿಯಾಗಿರುವ ಅನುಶ್ರೀ ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಳು. ಕೂಡಲೇ ಪ್ರಜ್ಞೆ ಕಳೆದುಕೊಂಡ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾಳೆ.


ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

Join Whatsapp
Exit mobile version