ಕೊಠಡಿ ಬಾಗಿಲು ಹಾಕಿಕೊಂಡು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Prasthutha|

ಬೆಳ್ತಂಗಡಿ: ಪದವಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.

- Advertisement -

ಕೊಕ್ರಾಡಿ ಗ್ರಾಮದ ಜಂತುಗೋಳಿ ಬಳಿಯ ರತ್ನಾಕರ ಮತ್ತು ರತ್ನಾ ದಂಪತಿಯ ಪುತ್ರ ರಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಆನ್ ಲೈನ್ ಕ್ಲಾಸ್ ಎಂದು ಮನೆಯ ಕೊಠಡಿಯೊಳಗೆ ಬಾಗಿಲು ಹಾಕಿ ಕುಳಿತುಕೊಂಡಿದ್ದ ಎನ್ನಲಾಗಿದೆ.

ಮಧ್ಯಾಹ್ನ ಊಟಕ್ಕೆಂದು ತಾಯಿ ಆತನ ಕೊಠಡಿಯ ಬಾಗಿಲು ಬಡಿದಿದ್ದಾರೆ, ಎಷ್ಟು ಹೊತ್ತಾದರೂ ಬಾಗಿಲು ತೆರೆದಿರಲಿಲ್ಲ. ಬಳಿಕ ಫೋನ್ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಕಂಡುಬಂತು. ನಂತರ ಕಿಟಕಿ ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ಷಿತ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆನ್ ಲೈನ್ ಕ್ಲಾಸ್ ಎಂದು ಬಾಗಿಲು ಹಾಕಿಕೊಂಡಿದ್ದ ವಿದ್ಯಾರ್ಥಿ ಯಾಕೆ ಈ ರೀತಿ ನಿರ್ಧಾರ ತೆಗೆದುಕೊಂಡ ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ.

Join Whatsapp