Home ಟಾಪ್ ಸುದ್ದಿಗಳು ಬನ್ನೇರುಘಟ್ಟ ಟಿಕೆ ಪಾಲ್ಸ್ ನಲ್ಲಿ ಹುಟ್ಟುಹಬ್ಬ ಆಚರಿಸಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಬನ್ನೇರುಘಟ್ಟ ಟಿಕೆ ಪಾಲ್ಸ್ ನಲ್ಲಿ ಹುಟ್ಟುಹಬ್ಬ ಆಚರಿಸಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಬೆಂಗಳೂರು:  ಸ್ನೇಹಿತನ ಹುಟ್ಟುಹಬ್ಬದ ಆಚರಿಸಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಸಮೀಪದ ಟಿಕೆ ಪಾಲ್ಸ್ ನಲ್ಲಿ ನಡೆದಿದೆ.

ಬಿಟಿಎಮ್ ಲೇಔಟ್ ನ ದೀಪಕ್ ಕುಮಾರ್(17) ಮೃತ ವಿದ್ಯಾರ್ಥಿ. ದೀಪಕ್ ಜಯನಗರದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಟಿಕೆ ಪಾಲ್ಸ್ ಗೆ ಸ್ನೇಹಿತರ ಜೊತೆ ಹೋಗಿದ್ದಾಗ ಅವಘಡ ಸಂಭವಿಸಿದೆ.

ಕಾಲೇಜಿಗೆ ರಜೆ ಹಾಕಿ ಸ್ನೇಹಿತನ ಬರ್ತಡೇ ಆಚರಿಸಲು ಬನ್ನೇರುಘಟ್ಟ ಸಮೀಪದ ಟಿಕೆ ಪಾಲ್ಸ್ ಗೆ ಹೋಗಿದ್ದಾರೆ. ಬರ್ತ್ಡೇ ಬಳಿಕ ಟಿಕೆ ಪಾಲ್ಸ್ ನಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ನೀರಿನಲ್ಲಿ ಮುಳುಗಿದ ಬಳಿಕ ಜೊತೆಯಲ್ಲಿದ್ದ ಇತರ ಸ್ನೇಹಿತರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಪೊಲೀಸರು ಕುಡಲೇ ಸ್ಥಳಕ್ಕೆ ಆಗಮಿಸಿ ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಯ ಮೃತ ದೇಹ ಹೊರತೆಗೆದಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version