ಈಜಲು ಹೋದ ವಿದ್ಯಾರ್ಥಿ ಸಾವು

Prasthutha|

ತುಮಕೂರು: ಮಹಾರಾಷ್ಟ್ರದ ವಿದ್ಯಾರ್ಥಿಯೋರ್ವ ಸ್ನೇಹಿತರೊಂದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗಿಡಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

 ಕೊರಟಗೆರೆ ಪಟ್ಟಣದ ಪ್ರಿಯದರ್ಶಿನಿ ಫಾರ್ಮಸಿ ಕಾಲೇಜ್ ವಿದ್ಯಾರ್ಥಿಯಾಗಿರುವ ಮಹಾರಾಷ್ಟ್ರ ಮೂಲದ ಗೌತಮ್ ಸಿಂಗ್ (21) ಮೃತ ದುರ್ದೈವಿಯಾಗಿದ್ದಾರೆ.

 ಕೊರಟಗೆರೆ ಪಟ್ಟಣದ ಹೊರವಲಯದ ಹೊಸಕೆರೆಯಲ್ಲಿ ಹಲವು ವಿದ್ಯಾರ್ಥಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿ ಅನುಮಾನಾಸ್ಪದವಾಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ ವಿದ್ಯಾರ್ಥಿ ಇಂದು ಕೆರೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ಪ್ರಿಯದರ್ಶಿನಿ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಬಹುತೇಕ ಹೊರ ರಾಜ್ಯದ ವಿದ್ಯಾರ್ಥಿಗಳಾಗಿದ್ದಾರೆ.

Join Whatsapp