ಅಸಭ್ಯ ವರ್ತನೆ ತೋರಿದ ಶಿಕ್ಷಕನಿಗೆ ಥಳಿಸಿದ ವಿದ್ಯಾರ್ಥಿನಿಯರು; ವೀಡಿಯೋ ವೈರಲ್

Prasthutha|

ಮಂಡ್ಯ : ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ಶಿಕ್ಷಕನಿಗೆ ವಿದ್ಯಾರ್ಥಿನಿಯರು ಒಟ್ಟಾಗಿ ಥಳಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ ನಡೆದಿದೆ.

- Advertisement -

ಚಿನ್ಮಯಾನಂದ ಮೂರ್ತಿ ಥಳಿತಕ್ಕೊಳಗಾದ ಮುಖ್ಯ ಶಿಕ್ಷಕನಾಗಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬುಧವಾರ ತಡರಾತ್ರಿ ಮದ್ಯದ ಅಮಲಿನಲ್ಲಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಸಹಪಾಠಿಗಳಿಗೆ ಮಾಹಿತಿ ನೀಡಿ ನಂತರ ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷಕನ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಈ ಸಂಬಂಧ  ಚಿನ್ಮಯಾನಂದ ವಿರುದ್ಧ ಎಫ್’ಐಆರ್ ದಾಖಲಾಗಿದ್ದು, ಹಾಸ್ಟೆಲ್ ವಾರ್ಡನ್ ಕೊಟ್ಟ ದೂರಿನ ಅನ್ವಯ ಕೆ.ಆರ್.ಎಸ್ ಠಾಣಾ ಪೊಲೀಸರು ಐಪಿಸಿ 354(A), 354(D),506,509 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪೊಲೀಸರು ಶಿಕ್ಷಕನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Join Whatsapp