ವಿಷಾಹಾರ ಸೇವಿಸಿ ವಿದ್ಯಾರ್ಥಿನಿ ಮೃತ್ಯು, 14 ಮಂದಿ ಅಸ್ವಸ್ಥ

Prasthutha|

- Advertisement -

ಕಾಸರಗೋಡು: ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ದೇವಾನಂದ ಎಂದು ತಿಳಿದು ಬಂದಿದೆ.

ಚೆರ್ವತ್ತೂರಿನ ಕೂಲ್ ಬಾರ್ ನಿಂದ ಶವರ್ಮ ಸೇವಿಸಿದ 14 ಮಂದಿ ಅಸ್ವಸ್ಥಗೊಂಡಿದ್ದಾರೆ. ಜ್ವರ, ವಾಂತಿ ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಅಲ್ಲದೆ, ಘಟನೆಗೆ ಕಾರಣವಾದ ಕೂಲ್ ಬಾರ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.

Join Whatsapp
Exit mobile version