ಪುನೀತ್ ಕಣ್ಣುಗಳನ್ನು ಇಬ್ಬರಿಗೆ ಅಳವಡಿಕೆ: ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

Prasthutha|

ಬೆಂಗಳೂರು: ನಟ ಪುನೀತ್ ರಾಜ್‍ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ಅವರು ಅಪ್ಪ ಡಾ.ರಾಜ್​ಕುಮಾರ್ ಹಾದಿಯಲ್ಲೇ ಸಾಗಿದ ಕಣ್ಣುಗಳನ್ನು ದಾನ ಮಾಡಿದ್ದಾರೆ.

- Advertisement -


ಈ ಮೂಲಕ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ. ಇಬ್ಬರಿಗೆ ಪುನೀತ್ ರಾಜ್​ ಕುಮಾರ್​ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಕೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ವೈದ್ಯರು ನಿನ್ನೆ ಒಬ್ಬರಿಗೆ, ಇಂದು ಮತ್ತೊಬ್ಬರಿಗೆ ಪುನೀತ್ ಕಣ್ಣುಗಳನ್ನು ಅಳವಡಿಸಿದ್ದಾರೆ. ಈ ಮೂಲಕ ಪುನೀತ್ ಅವರು ಅಂಧರ ಬಾಳಿನಲ್ಲಿ ಬೆಳಕಾಗಿದ್ದಾರೆ.

ಈ ಬಗ್ಗೆ ವೈದ್ಯರು ನವೆಂಬರ್ 2ಕ್ಕೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.

Join Whatsapp