ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| 7 ಮಂದಿ ಸಾವು, ಹಲವರು ಕಣ್ಮರೆ

Prasthutha|

ಕೊಲ್ಕತ್ತಾ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾದ ಪರಿಣಾಮ ಏಳು ಮಂದಿ ಮೃತಪಟ್ಟು ಹಲವರು ಕಣ್ಮರೆಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

- Advertisement -

ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆಯನ್ನು ವೀಕ್ಷಿಸಲು ಭಾರಿ ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು. ಈ ವೇಳೆ ಏಕಾಏಕಿ ನೀರು ನುಗ್ಗಿದೆ.

ಮೂರ್ತಿ ವಿಸರ್ಜನೆ ವೀಕ್ಷಿಸುತ್ತಿದ್ದವರಲ್ಲಿ ಹಲವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. 7 ಮಂದಿ ಮೃತಪಟ್ಟಿದ್ದು, 10 ಮಂದಿಯನ್ನು ರಕ್ಷಿಸಲಾಗಿದೆ. ಆದರೆ 50 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

- Advertisement -

ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೀರಿನ ಸೆಲೆಗೆ ಸಿಲುಕಿ ರಕ್ಷಣೆಗಾಗಿ ಮೊರೆ ಇಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

Join Whatsapp