ಸುದೀಪ್ ಜನ್ಮದಿನ ಆಚರಣೆ: ಕೋಣ ಬಲಿಕೊಟ್ಟು ವಿಕೃತಿ ಮೆರೆದ ಅಭಿಮಾನಿಗಳು!

Prasthutha|

ಬಳ್ಳಾರಿ: ನಟ ಸುದೀಪ್ ಹುಟ್ಟುಹಬ್ಬ ಹಿನ್ನೆಲೆ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಕೋಣವನ್ನು ಬಲಿ ನೀಡಿ ರಕ್ತಾಭಿಷೇಕ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -


ಸುದೀಪ್ ಅವರ ಕಟೌಟ್ ಮುಂದೆ ಕೋಣವನ್ನು ಬಲಿ ನೀಡಿ ಹುಟ್ಟಹಬ್ಬವನ್ನು ಆಚರಿಸಲಾಗಿದೆ. ಕೋಣ ಕಡಿಯುವುದನ್ನು ವಿಡಿಯೋ ಮಾಡಲಾಗಿದ್ದು, ಅದು ಸಾಕಷ್ಟು ಸದ್ದು ಮಾಡುತ್ತಿದೆ.


ಸುದೀಪ್ ಅಭಿಮಾನಿಗಳಿಂದ ಪ್ರಾಣಿ ಹಿಂಸೆ ಆಗಿರುವುದು ಪ್ರಾಣಿದಯಾ ಸಂಘದಿಂದ ಆಕ್ಷೇಪ ವ್ಯಕ್ತವಾಗಿದೆ. ಹುಟ್ಟುಹಬ್ಬ ಸಂದರ್ಭದಲ್ಲಿ ಈ ರೀತಿಯಾಗಿ ಹುಚ್ಚಾಟ ಮೆರೆಯುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಇತ್ತೀಚೆಗೆ ಗೋಹತ್ಯೆ ನಿಷೇಧದ ಬಗ್ಗೆ ಹೊಸಪೇಟೆಯಲ್ಲಿ ಅಧಿಕಾರಿಗೆ ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹ್ಹಾಣ್ ಮಾತನಾಡಿದ್ದರು. ಜಿಲ್ಲೆಗೆ ಸಚಿವರು ಬಂದು ಹೋಗಿ ಎರಡೇ ದಿನದಲ್ಲಿ ಪ್ರಾಣಿಬಲಿ ಕೊಟ್ಟು ಅಭಿಮಾನಿಗಳು ವಿಕೃತಿ ಮೆರೆದಿದ್ದಾರೆ.

Join Whatsapp