ಸುಳ್ಯ: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ

Prasthutha|

ಸುಳ್ಯ: ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಜಟ್ಟಿಪಳ್ಳದಲ್ಲಿ ನಡೆದಿದೆ.

- Advertisement -


ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಸುಳ್ಯ.ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ರವರ ಪತಿ, ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಎಂದು ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.


ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು, ಪರಿಶೀಲನೆ ನಡೆಸಿ ಘಟನೆಗೆ ಕಾರಣವೇನೆಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ. ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ‌ ತಿಳಿದು ಬರಲಿದೆ.

Join Whatsapp