ಸುಳ್ಯ ‍: ಬಿಜೆಪಿ ಯುವ ನಾಯಕನ ಮೇಲೆ ತಲವಾರು ದಾಳಿ

Prasthutha|

ಬೆಳ್ಳಾರೆ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆದಿರುವ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ.

- Advertisement -

ಪ್ರವೀಣ್ ನೆಟ್ಟಾರು ದಾಳಿಗೊಳಗಾದವರು.

ದಾಳಿಗೊಳಗಾದ ಪ್ರವೀಣ್ ರನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಬೆಳ್ಳಾರೆ ಪೆಟ್ರೋಲ್ ಪಂಪ್ ಬಳಿಯ ಮಾಸ್ತಿ ಕಟ್ಟೆ ಎಂಬಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಇವರಿಗೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬೆಳ್ಳಾರೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

- Advertisement -


ಇತ್ತೀಚಿಗಷ್ಟೇ ಬೆಳ್ಳಾರೆಯ ಕಳಂಜ ಎಂಬಲ್ಲಿ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಗೈದಿದ್ದರು.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Join Whatsapp