ಸುಳ್ಯ | ಗೋಣಿ ಚೀಲದಲ್ಲಿ ಯುವತಿಯ ಮೃತದೇಹ ಪತ್ತೆ: ಪತಿ ಪರಾರಿ

Prasthutha|

ಸುಳ್ಯ: ದೆಹಲಿಯ ಶ್ರದ್ದಾ ಹತ್ಯೆ ಮಾಸುವ ಮುನ್ನವೇ ಗೋಣಿ ಚೀಲದಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೀರಮಂಗಲ ನಡೆದಿದೆ.

- Advertisement -

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿರುವ ಇಮ್ರಾನ್ ತನ್ನ ಪತ್ನಿಯನ್ನು ಹತ್ಯೆಮಾಡಿ ಮೃತದೇಹ ಗೋಣಿಚೀಲದೊಳಗೆ ಹಾಕಿದ್ದಾನೆ ಎಂದು ಶಂಕಿಸಲಾಗಿದೆ.

ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಕಳೆದ ಆರು ತಿಂಗಳಿನಿಂದ ದಂಪತಿ ವಾಸವಾಗಿದ್ದು, ಕೆಲ ದಿನಗಳ ಹಿಂದೆ ಮನೆಯಲ್ಲಿ ಕಿರುಚಿದ ಶಬ್ದ ಕೇಳಿತ್ತು. ಅಲ್ಲದೆ,  ಇಮ್ರಾನ್ ಊರಿಗೆಂದು ಹೊರಟು ಹೋಗಿದ್ದಾಗ ಪತ್ನಿಯನ್ನು ಜೊತೆಗೆ ಕರೆದುಕೊಂಡು ಹೋಗಿಲ್ಲ.  

- Advertisement -

ಇದರಿಂದ ಸಂಶಯಗೊಂಡ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರು ಬಾಗಿಲು ಒಡೆದು ನೀಡಿದಾಗ ಗೋಣಿಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Join Whatsapp