ಸುಳ್ಯ: ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮೃತ್ಯು

Prasthutha|

ಸುಳ್ಯ: ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಸುಳ್ಯದ ಗುರುಂಪು ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

- Advertisement -


ಗುರುಂಪು ಬಳಿ ಅಬೂಬಕ್ಕರ್ ಎಂಬವರ ಮನೆಯ ಹಿಂಭಾಗದಲ್ಲಿ ಫಿಲ್ಲರ್ ಹಾಕಿ ತಡೆಗೋಡೆಯ ಕಾಮಗಾರಿ ನಡೆಸಲಾಗುತ್ತಿತ್ತು. ಅಲ್ಲಿ ಹಲವು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಶನಿವಾರ ಮಧ್ಯಾಹ್ನ ಏಕಾಏಕಿ ಬರೆಯ ಮಣ್ಣು ಕುಸಿದಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಮಣ್ಣಿನಡಿ ಸಿಲುಕಿದ್ದು, ತಕ್ಷಣ ಸ್ಥಳೀಯರು ಹಾಗೂ ಪೊಲೀಸರು, ಅಗ್ನಿಶಾಮಕ ದಳದವರು ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಒಂದು ಗಂಟೆಯ ಬಳಿಕ ಮೂವರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.
ಮೃತಪಟ್ಟವರನ್ನು ಗದಗದ ಮುಂಡರಗಿ ಮೂಲದ ಸೋಮಶೇಖರ, ಶಾಂತಾ ದಂಪತಿ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಇನ್ನಷ್ಟೇ ತಿಳಿಯಬೇಕಿದೆ.

Join Whatsapp