ಕುಮಾರಸ್ವಾಮಿ ಪರ ಪ್ರಚಾರ ಮಾಡದ ಸುಮಲತಾ: ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಪರ ಪ್ರಚಾರ

Prasthutha|

ಮೈಸೂರು: ಮಂಡ್ಯ ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ದೂರ ಉಳಿದ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ , ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಪ್ರಚಾರ ನಡೆಸಿದ್ದಾರೆ.

- Advertisement -

ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಸುಮಲತಾ ಅಂಬರೀಶ್‌, ಯದುವೀರ್ ಒಡೆಯರ್ ಅವರು ತುಂಬ ಸರಳ ವ್ಯಕ್ತಿ, ನಿಮ್ಮೆಲ್ಲರ ಸೇವೆ ಮಾಡಲು ಬಂದಿದ್ದಾರೆ. ಹೀಗಾಗಿ ಅವರನ್ನ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಮೈಸೂರು ಜನತೆಯಲ್ಲಿ ಮನವಿ ಮಾಡಿದ್ದಾರೆ.

ನಾನು ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದಾಗ ನನ್ನ ನೆರೆವಿಗೆ ನಿಂತದ್ದೇ ನನ್ನ ಮಹಿಳೆಯರು. ಮೈಸೂರು ಅಂದರೆ ನಮಗೆ ಅವಿನಾಭಾವ ಸಂಬಂಧ ಇದೆ. ಅಂಬರೀಶ್ ಅವರು ಓದಿದ್ದು, ಬೆಳೆದಿದ್ದು ಇಲ್ಲಿಯೇ. ನಾವು ಇಲ್ಲಿ ಹಲವಾರು ಸಿನಿಮಾ ಚಿತ್ರೀಕರಣಕ್ಕೆ ಬರುತ್ತಿದ್ದೆವು. ಇದು ಸುಂದರ, ಸಾಂಸ್ಕೃತಿಕ ನಗರ. ಇದು ಸ್ವಾತಂತ್ರ್ಯ ಪೂರ್ವದಲ್ಲೇ ಅಭಿವೃದ್ಧಿ ಹೊಂದಿದ ನಗರ. ಇದಕ್ಕೆ ಯಾರು ಕಾರಣ? ಆಧುನಿಕ ನಗರ ನಿರ್ಮಾಣಕ್ಕೆ ಮೈಸೂರು ಮಹಾರಾಜರ ಕೊಡುಗೆ ಅಪಾರ ಎಂದು ಸುಮಲತಾ ಹೇಳಿದರು.

Join Whatsapp