ಇಂದೂ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಇಳಿಯದ ಸುಮಲತಾ

Prasthutha|

ಮಂಡ್ಯ: ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಮಂಡ್ಯದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಪರ ಪ್ರಚಾರ ಮಾಡುವ ವೇಳಾಪಟ್ಟಿ ಸಿದ್ಧಗೊಂಡಿದ್ದರೂ ಸುಮಲತಾ ಪ್ರಚಾರಕ್ಕೆ ತೆರಳಿಲ್ಲ.

- Advertisement -

ಸುಮಲತಾ ಒಮ್ಮೆಯೂ ಪ್ರಚಾರಕ್ಕೆ ಬಾರದಿರುವುದರಿಂದ ಜೆಡಿಎಸ್‌ ಸಿಡಿಮಿಡಿಗೊಂಡಿದೆ. ಸುಮಲತಾ ಪರವಾಗಿ ಕಳೆದ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದ ನಟ ದರ್ಶನ್ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದ್ದಾರೆ.

ಕ್ಷೇತ್ರದ ಸಂಸದರಾಗಿರುವ ಸುಮಲತಾ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದದ್ದು ಸ್ಪಷ್ಟವಾಗಿದೆ. ಬಿಜೆಪಿ ಹೈಕಮಾಂಡ್ ಸೂಚನೆಯಂತೆಯೇ ಸುಮಲತಾ ಮಂಡ್ಯ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂದೂ ಹೇಳಲಾಗುತ್ತಿದೆ.

- Advertisement -

ಸುಮಲತಾ ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯದೆ ಕೈಕೊಟ್ಟದ್ದು ಜೆಡಿಎಸ್ ನಾಗಾಲೋಟಕ್ಕೆ ಸಣ್ಣ ಬ್ರೇಕ್ ಹಾಕಿದಂತಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿದೆ.ಹಾಸನದಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾರ ಸಿಕ್ಕಿಲ್ಲ. ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

Join Whatsapp