ಕುಮಾರ ಸ್ವಾಮಿ, ಯತ್ನಾಳ್‌ಗೆ ಸಮನ್ಸ್ ಜಾರಿ

Prasthutha|

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿಯಾಗಿದೆ.

- Advertisement -

ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದರ ಹಿನ್ನೆಲೆಯಲ್ಲಿ ಈ ಸಮನ್ಸ್ ಜಾರಿಯಾಗಿದೆ.

- Advertisement -

ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಸೂಚಿಸೋದಕ್ಕೆ ಕೋರಿ ದೂರು ಸಲ್ಲಿಸಲಾಗಿತ್ತು.

ದೂರುದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ತನಿಖಾ ಆಯೋಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವರಾಜ ದಡೇಸೂರು, ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ, ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿದೆ.

Join Whatsapp