ಶೈಖುನಾ ತಾಜುಶ್ಶರೀಅಃ ಅಲಿ ಕುಂಞಿ ಉಸ್ತಾದ್ ವಿಧಿವಶ

Prasthutha|

ಧಾರ್ಮಿಕ ವಿದ್ವಾಂಸರೂ, ಶೈಕ್ಷಣಿಕ ಕ್ರಾಂತಿಯ ರೂವಾರಿಯೂ, ಸಮಸ್ತದ ಉಪಾಧ್ಯಕ್ಷರಾಗಿದ್ದ ಶೈಖುನಾ ತಾಜು ಶರೀಅಃ ಅಲಿ ಕುಂಞಿ ಉಸ್ತಾದರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

- Advertisement -

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಯುತರು ಚಿಕಿತ್ಸೆ ಫಲಕಾರಿಯಾಗದೆ ಅಗಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅಗಣ್ಯ ಸಾಧನೆ ಮಾಡಿ ಶಿಕ್ಷಣಕ್ಕೆ ಒತ್ತು ಕೊಟ್ಟು ಜೀವನಪೂರ್ತಿ ಸಮಾಜದ ಏಳಿಗೆಗಾಗಿ ಶ್ರಮಿಸಿದ್ದರು ಅಲಿ ಕುಂಞಿ ಉಸ್ತಾದ್.

ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷರಾಗಿದ್ದ ಅವರು ದ.ಕ ಮತ್ತು ಕಾಸರಗೋಡು ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿಯಾಗಿ ಕಾರ್ಯನಿರ್ವಹಿಸಿದ್ದರು. ಶಿರಿಯಾ ಲತೀಫಿಯ್ಯಾ ಎಜುಕೇಶನಲ್ ಕಾಂಪ್ಲೆಕ್ಸ್ ಇದರ ಅಧ್ಯಕ್ಷರಾಗಿದ್ದ ಅವರು ನಾಡಿನ ಪ್ರಮುಖ ವಿದ್ವಾಂಸರಾಗಿ ಗುರುತಿಸಲ್ಪಟ್ಟಿದ್ದರು.

- Advertisement -

ಇವರ ಅಗಲಿಕೆ ರಾಜ್ಯದ ವಿವಿಧ ಸಂಘಟನೆಗಳು, ಸಾಮಾಜಿಕ, ಧಾರ್ಮಿಕ, ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದ, ಕುಂಬಳೆ ಸಮೀಪದ ಶಿರಿಯಾ ನಿವಾಸಿಯಾದ ಅವರು ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳ ಮತ್ತು ಸಾವಿರಾರು ಶಿಷ್ಯಂದಿರನ್ನು ಅಗಲಿದ್ದಾರೆ.

Join Whatsapp