ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

Prasthutha|

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯದಿಂದ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

2020ರಲ್ಲಿ, ರಜನಿಕಾಂತ್ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಮೊನ್ನೆಯಷ್ಟೆ ದೆಹಲಿಯಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ರಜನಿಕಾಂತ್ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದರು. ಪ್ರಶಸ್ತಿ ಪಡೆಯಲು ದೆಹಲಿಗೆ ತೆರಳಿದ್ದ ಅವರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಜನ್ಯಪೂರ್ವಕವಾಗಿ ಭೇಟಿ ಮಾಡಿದ್ದರು.

Join Whatsapp