ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಗೆ ಮನವಿ

Prasthutha|

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಂಜುಮಾನ್ ಇಸ್ಲಾಂ ಸಂಸ್ಥೆಯು ಸುಪ್ರೀಂ ಕೋರ್ಟ್ ಗೆ ಮೇನ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಯಬೇಕಿದೆ.

- Advertisement -

ಮೊದಲು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಅನುಮತಿ ನೀಡಿದ ಹುಬ್ಬಳ್ಳಿ ಧಾರವಾಡ ನಗರಪಾಲಿಕೆ ಆಯುಕ್ತರ ನಿರ್ಧಾರ ಪ್ರಶ್ನಿಸಿ ಅಂಜುಮಾನ್ ಇಸ್ಲಾಂ ಹೈಕೋರ್ಟ್ ಮೊರೆಹೋಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಅಂಜುಮಾನ್ ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಷರತ್ತುಬಧ್ದ ಅನುಮತಿ ನೀಡಿದ್ದು ಸಂಘ ಪರಿವಾರ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪಣೆ ಮಾಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಂಜುಮಾನ್ ಇಸ್ಲಾಂ ಸಂಸ್ಥೆಯು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ನೀಡಿದ ತೀರ್ಪು ಹುಬ್ಬಳ್ಳಿಯಲ್ಲೂ ನೀಡಬೇಕು ಎಂದು ಕೋರಿಕೊಂಡಿದ್ದು ಅರ್ಜಿ ವಿಚಾರಣೆ ಇನ್ನಷ್ಡೇ ನಡೆಯಬೇಕಿದೆ.

Join Whatsapp