Home ಟಾಪ್ ಸುದ್ದಿಗಳು ಪಶುವೈದ್ಯೆ ಅತ್ಯಾಚಾರ ಪ್ರಕರಣ: ಹೈದರಾಬಾದ್ ಎನ್ಕೌಂಟರ್ ಉದ್ದೇಶಪೂರ್ವಕ ಎಂದ ಸುಪ್ರೀಂ ಕೋರ್ಟ್

ಪಶುವೈದ್ಯೆ ಅತ್ಯಾಚಾರ ಪ್ರಕರಣ: ಹೈದರಾಬಾದ್ ಎನ್ಕೌಂಟರ್ ಉದ್ದೇಶಪೂರ್ವಕ ಎಂದ ಸುಪ್ರೀಂ ಕೋರ್ಟ್

ನವದೆಹಲಿ: 2019ರಲ್ಲಿ ನಡೆದ ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ  ಆರೋಪಿಗಳ ಎನ್ಕೌಂಟರ್ ಉದ್ದೇಶಪೂರ್ವಕವಾಗಿ ನಡೆಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ನ್ಯಾಯಮೂರ್ತಿ ಸಿರ್ಪುರ್ಕರ್ ಆಯೋಗ ಹೇಳಿದೆ.

ಆರೋಪಿಗಳಲ್ಲಿ ನಾಲ್ವರಲ್ಲಿ ಮೂವರು ಅಪ್ರಾಪ್ತ ವಯಸ್ಕರಾಗಿದ್ದರು. ಈ ಪ್ರಕರಣದ ತನಿಖೆಯಲ್ಲಿ ಸಾಕಷ್ಟು ಲೋಪಗಳಿವೆ ಎಂದು ತೋರಿಸಿರುವ ಆಯೋಗ, 10 ಮಂದಿ ಪೊಲೀಸರನ್ನು ಕೊಲೆ ಆರೋಪದಲ್ಲಿ  ವಿಚಾರಣೆಗೆ ಒಳಪಡಿಸಲು ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರ ನೇತೃತ್ವದ ಮೂವರು ಸದಸ್ಯರ ಸಮಿತಿ ಈ ಕುರಿತು ಸುಪ್ರೀಂಕೋರ್ಟ್ ಗೆ ವರದಿ ನೀಡಿದ್ದು, ಈ ಎನ್ಕೌಂಟರ್ ಪೊಲೀಸರ ಸೃಷ್ಟಿ ಎಂದು ತಿಳಿಸಿದೆ.  “ಅವರನ್ನು ಸಾಯಿಸುವ ಬಯಕೆಯಿಂದಲೇ ಉದ್ದೇಶಪೂರ್ವಕವಾಗಿ ಗುಂಡು ಹಾರಿಸಲಾಗಿತ್ತು” ಎಂದು ವರದಿ ಉಲ್ಲೇಖಿಸಿದೆ. ಈ ವರದಿ ಸಲ್ಲಿಕೆಯ ಬಳಿಕ ಅದರ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುವಂತೆ ತೆಲಂಗಾಣ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಪಶುವೈದ್ಯೆಯ ಅತ್ಯಾಚಾರ- ಕೊಲೆ ಆರೋಪಿಗಳ ಎನ್ ಕೌಂಟರನ್ನು ಕೆಲವರು ಸಂಭ್ರಮಿಸಿದ್ದರು. ಕೆಲವರು ನ್ಯಾಯಾಲಯ ಶಿಕ್ಷೆ ವಿಧಿಸುವ ಮೊದಲು ಪೊಲೀಸರ ಎನ್ ಕೌಂಟರ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ನೈಜ ಆರೋಪಿಗಳ ರಕ್ಷಣೆಗೆ ಎನ್ ಕೌಂಟರ್ ನಡೆದಿದೆ ಎಂಬ ಟೀಕೆ ಕೂಡ ವ್ಯಕ್ತವಾಗಿತ್ತು.

Join Whatsapp
Exit mobile version