Home ಟಾಪ್ ಸುದ್ದಿಗಳು ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ

ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ

ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀಗಳ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.


ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ.


ಮುರುಘಾ ಮಠದ ಹಾಸ್ಟೆಲ್ನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಕಳೆದ ಸೆಪ್ಟಂಬರ್ 2ರಂದು (2022) ಚಿತ್ರದುರ್ಗದ ಪೊಲೀಸರು ಬಂಧಿಸಿದ್ದರು.

Join Whatsapp
Exit mobile version