ಬರ ಪರಿಹಾರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿಲ್ಲ: ಅಶೋಕ್

Prasthutha|

ಬೆಂಗಳೂರು: ಬರ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಚಾಟಿ ಹೇಳಿದ್ದಾರೆ.

- Advertisement -

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನಗೆಟ್ಟ ಕಾಂಗ್ರೆಸ್ ತಪ್ಪು ವ್ಯಾಖ್ಯಾನ ಮಾಡಿ ಜಯವೆಂದು ಬಿಂಬಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ. ಇದೇ ವಿಷಯವನ್ನು ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಪ್ರಸ್ತಾಪಿಸಿ, ‘ನೆಕ್ಸ್ಟ್ ಮಂಡೆ ( ಏಪ್ರಿಲ್ 29) ಸಮ್ ಥಿಂಗ್ ವಿಲ್ ಬಿ ಹ್ಯಾಪನ್’ ಎಂದಾಗ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಸಹಮತ ವ್ಯಕ್ತಪಡಿಸಿದ್ದಾರೆ. ಈ ಕೇಸ್ ನಲ್ಲಿ ವಾದ ಮಾಡುವ ಅಗತ್ಯವೇನಿಲ್ಲವೆಂದು ನ್ಯಾಯಾಲಯ ಹೇಳಿದೆ ಎಂದು ಅಶೋಕ್ ತಿಳಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ, ತೊಂದರೆ ನೀಡುತ್ತಿದೆ ಎಂದು ರಾಜ್ಯದ ಪರ ವಕೀಲ ವಾದ ಮಾಡಿಲ್ಲ. ಸುಪ್ರೀಂ ಕೋರ್ಟ್ ಅವಕಾಶ ಕೊಟ್ಟಿಲ್ಲ. ವಾರದೊಳಗೆ ಬಿಡುಗಡೆ ಮಾಡಿ ಎಂದೂ ಆದೇಶಿಸಿಲ್ಲ ಎಂದು ವಿಪಕ್ಷ ನಾಯಕ ಹೇಳಿದ್ದಾರೆ.

Join Whatsapp