ಜ್ಞಾನವಾಪಿ ಮಸೀದಿ ಆವರಣದಲ್ಲಿ ವಝುಗೆ ಅನುಮತಿ ನೀಡುವ ಕುರಿತು ಸಭೆ ನಡೆಸಲು ಜಿಲ್ಲಾಧಿಕಾರಿಗೆ ಸುಪ್ರೀಂ ಕೋರ್ಟ್ ಸೂಚನೆ

Prasthutha|

ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಮುಸ್ಲಿಮರಿಗೆ ವಝುಗೆ (ಅಂಗ ಶುದ್ಧಿ) ಅವಕಾಶ ನೀಡುವ ಕುರಿತು ಸಭೆ ನಡೆಸುವಂತೆ ಸ್ಥಳೀಯ ಜಿಲ್ಲಾಧಿಕಾರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

- Advertisement -

ರಂಝಾನ್‌ ವೇಳೆ ಜ್ಞಾನವಾಪಿ ಆವರಣದಲ್ಲಿ ವಝುಗೆ ಅವಕಾಶ ನೀಡುವಂತೆ ಕೋರಿ ಅಂಜುಮಾನ್ ಇಂತಝಾಮಿಯಾ ಮಸ್ಜಿದ್ ಸಮಿತಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದು, ಇಂದು (ಮಂಗಳವಾರ) ಸಭೆ ನಡೆಯಲಿದೆ.

- Advertisement -

ಮಸೀದಿ ಆವರಣದಲ್ಲಿ ಹಿಂದೂ ಮತ್ತು ಮುಸ್ಲಿಮರಿಗೆ ಹೊಂದಿಕೆಯಾಗುವಂಥ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಸಭೆಯಲ್ಲಿ ತೆಗೆದುಕೊಳ್ಳಲಾಗುವ ನಿರ್ಧಾರವನ್ನು ಜಾರಿಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.

Join Whatsapp