ಜಹಾಂಗೀರ್’ಪುರ್ ತೆರವು ಕಾರ್ಯಾಚರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಹನುಮ ಜಯಂತಿಯ ವೇಳೆ ಘರ್ಷಣೆ ನಡೆದ ದೆಹಲಿಯ ಜಹಾಂಗೀರ್’ಪುರದಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಆರಂಭಿಸಿದ್ದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

- Advertisement -


ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಪ್ರಾರಂಭಿಸಿರುವ ಡೆಮೋಲಿಷನ್ ಡ್ರೈವ್ ವಿರುದ್ಧ ಆದೇಶ ನೀಡಿರುವ ಪೀಠ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಸುಪ್ರೀಂ ಕೋರ್ಟ್ ಹಿರಿಯ ವಕೀಲ ದುಷ್ಯಂತ್ ದವೆ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.


ಕಳೆದ ವಾರ ಕೋಮು ಹಿಂಸಾಚಾರ ನಡೆದ ಜಹಾಂಗೀರ್ ಪುರಿಯಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆ ಸಂಪೂರ್ಣ ಅಕ್ರಮವಾಗಿದೆ. ನೋಟಿಸ್ ಕೂಡ ನೀಡಲ್ಲ. ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯಡಿ ಮನವಿ ಸಲ್ಲಿಸಲು ಅವಕಾಶವಿದೆ. ನಾವು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದ್ದೇವೆ. ಅದು ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಬರಲಿದೆ. ಆದರೆ ಅವರು ಈಗಲೇ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದ್ದರಿಂದ ಕಾರ್ಯಾಚರಣೆ ನಿಲ್ಲಿಸಲು ಸೂಚನೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

- Advertisement -


ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿಗಳು, ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ್ದಾರೆ. ಅಲ್ಲದೇ ಸೂಕ್ತ ಪೀಠ ವಿಚಾರಣೆ ನಡೆಸಲಿದೆ ವಿಚಾರಣೆ ಮುಂದೂಡಿದರು.

Join Whatsapp
Exit mobile version