ನಾಳೆ ಸುಪ್ರೀಂ ಕೋರ್ಟ್ ನಿಂದ ಹಿಜಾಬ್ ತೀರ್ಪು ಪ್ರಕಟ

Prasthutha|

ನವದೆಹಲಿ: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್’ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.

- Advertisement -


ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರನ್ನೊಳಗೊಂಡ ಪೀಠ ಸತತ 10 ದಿನಗಳ ಕಾಲ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದು, ಸೆಪ್ಟೆಂಬರ್ 22ರಂದು ತನ್ನ ತೀರ್ಪನ್ನು ಕಾಯ್ದಿರಿಸಿದೆ.


ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16ಕ್ಕೆ ನಿವೃತ್ತರಾಗಲಿದ್ದು, ಈ ನಿಟ್ಟಿನಲ್ಲಿ ಗುರುವಾರ ತೀರ್ಪನ್ನು ಪ್ರಕಟಿಸಲಿದ್ದಾರೆ.

Join Whatsapp