ಮೇಲ್ಜಾತಿಗೆ ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್: ಸಾಮಾಜಿಕ ನ್ಯಾಯದ ಶತಮಾನದ ಹೋರಾಟಕ್ಕೆ ಹಿನ್ನಡೆ ಎಂದ ಎಂ.ಕೆ. ಸ್ಟಾಲಿನ್

Prasthutha|

ಚೆನ್ನೈ: ಸಾಮಾಜಿಕವಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇ.ಡಬ್ಲ್ಯೂ.ಎಸ್) ನೀಡಿದ ಮೀಸಲಾತಿಯನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್ ಆದೇಶವು ಸಾಮಾಜಿಕ ನ್ಯಾಯಕ್ಕಾಗಿ ಶತಮಾನಗಳಷ್ಟು ಹಳೆಯದಾದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

- Advertisement -

ಮುಂದಿನ ಕ್ರಮಗಳ ಕುರಿತು ನಿರ್ಧರಿಸಲು ಕಾನೂನು ತಜ್ಞರನ್ನು ಸಂಪರ್ಕಿಸುವುದಾಗಿ ಡಿ.ಎಂ.ಕೆ ಮುಖ್ಯಸ್ಥರು, ಮುಖ್ಯಮಂತ್ರಿ ಸ್ಟಾಲಿನ್ ಅವರು ತಿಳಿಸಿದ್ದಾರೆ.

ತೀರ್ಪಿನ ಸಂಪೂರ್ಣ ವಿಶ್ಲೇಷಣೆ ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ ಬಳಿಕ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ ಈ ಮೀಸಲಾತಿ ವ್ಯವಸ್ಥೆಯ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸಲು ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

- Advertisement -

ತಮಿಳುನಾಡಿನ ಡಿಎಂಕೆ ಸರ್ಕಾರ ಈ ಪ್ರಕರಣದ ಕಕ್ಷಿದಾರರಲ್ಲಿ ಒಂದಾಗಿತ್ತು ಮತ್ತು ಸರ್ಕಾರಿ ಉದ್ಯೋಗಗಳಿಗೆ ಇಡಬ್ಲೂಎಸ್ ಕೋಟಾವನ್ನು ನೀಡದಿರುವ ನಿರ್ಧಾರವನ್ನು ತೆಗೆದುಕೊಂಡಿದೆ.

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಆರ್ಥಿಕವಾಗಿ ವರ್ಗಗಳಿಗೆ (EWS) 10% ಮೀಸಲಾತಿಯನ್ನು ಪರಿಚಯಿಸಿದ 103ನೇ ಸಾಂವಿಧಾನಿಕ ತಿದ್ದುಪಡಿಯ ಸಿಂಧುತ್ವವನ್ನು ಸುಪ್ರೀಮ್ ಕೋರ್ಟ್ ಪೀಠವು 3:2 ಬಹುಮತದೊಂದಿಗೆ ಎತ್ತಿಹಿಡಿದಿತ್ತು.

Join Whatsapp