ಲಿಖಿಂಪುರ ಹಿಂಸಾಚಾರ: ನಾಳೆಯೊಳಗೆ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ

Prasthutha|

ಲಕ್ನೋ: ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದು, ಬಳಿಕ ಉಂಟಾದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ನಾಳೆಯೊಳಗೆ ಘಟನೆಯ ಸ್ಥಿತಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್​ ಇಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

- Advertisement -

ಈ ಹಿಂಸಾಚಾರದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಈ ಪ್ರಕರಣದ ವಿಚಾರಣೆ ಇಂದು ನಡೆಸಿರುವ ಸುಪ್ರೀಂಕೋರ್ಟ್​, ನಾಳೆಯೊಳಗೆ ಕೋರ್ಟ್ ​ಗೆ ವರದಿ ಸಲ್ಲಿಸಬೇಕು. ಅದರಲ್ಲಿ ಪ್ರಕರಣದ ಆರೋಪಿಗಳ ಬಗ್ಗೆ ವಿವರ ಇರಬೇಕು. ಒಂದೊಮ್ಮೆ ಆರೋಪಿಗಳನ್ನು ಬಂಧಿಸಿದ್ದರೆ ಅದರ ಉಲ್ಲೇಖವೂ ಇರಬೇಕು ಎಂದು ಹೇಳಿದೆ.

Join Whatsapp