ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

Prasthutha|

ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

- Advertisement -


ಪ್ರಕರಣದ ಆರೋಪಿಗಳಾದ ಕುಲಾಯಿಯ ಗಿರಿಧರ್, ಕೈಕಂಬದ ದೀಕ್ಷಿತ್’ಗೆ ಜಾಮೀನು ಮಂಜೂರಾಗಿದೆ.


ಕಳೆದ ವರ್ಷ ಜುಲೈ 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ಸಂಘಪರಿವಾರದ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.