ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ಸಾವರ್ಕರ್ ಹೆಸರು; ಪ್ರಸ್ತಾವ ಸ್ವೀಕರಿಸಿದ ಪಾಲಿಕೆ

Prasthutha|

ಮಂಗಳೂರು: ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ಸಾವರ್ಕರ್ ಹೆಸರನ್ನಿಡಲು ಸಲ್ಲಿಸಲಾಗಿದ್ದ ಮನವಿಯನ್ನು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಸ್ಥಿರೀಕರಿಸಲಾಗಿದೆ.

- Advertisement -

ಶಾಸಕ ವೈ.ಭರತ ಶೆಟ್ಟಿ ಈ ವೃತ್ತಕ್ಕೆ ಸಾವರ್ಕರ್ ಹೆಸರು ಇಡಲು ಮನವಿ ಸಲ್ಲಿಸಿದ್ದರು. 2021ರ ಅ. 3ರಂದು ನಡೆದಿದ್ದ ಸಭೆಯಲ್ಲಿ ಪರಿಷತ್ತಿನ ಸಭೆಯಲ್ಲಿ ಈ ಪ್ರಸ್ತಾವನೆಗೆ ಪಾಲಿಕೆ ಸದಸ್ಯರಾದ ಎ.ಸಿ.ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ ಮುಂತಾದವರಿಂದ ವಿರೋಧ ವ್ಯಕ್ತವಾಗಿತ್ತು.

ಕೆಲ ತಿಂಗಳುಗಳ ಹಿಂದೆ ಈ ಜಂಕ್ಷನ್ ನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಆದರೆ ಸಾರ್ವಜನಿಕರ ಆಕ್ಷೇಪದ ಮೇರೆಗೆ ಪಾಲಿಕೆ ಅಧಿಕಾರಿಗಳು ಭಾವಚಿತ್ರವನ್ನು ತೆರವುಗೊಳಿಸಿದ್ದರು.

- Advertisement -

ಈ ಪ್ರಸ್ತಾವನೆ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ, ಸಾರ್ವಜನಿಕರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಿ ಬಳಿಕ ಅಂತಿಮ ನಿರ್ಣಯ ಕೈಗೊಳ್ಳಲಿದೆ ಎಂದು ಪಾಲಿಕೆ ತಿಳಿಸಿದೆ.

Join Whatsapp