ಸುರತ್ಕಲ್ | ಕಾರು, ಟಿಪ್ಪರ್ ನಡುವೆ ಅಪಘಾತ: ಓರ್ವ ಮೃತ್ಯು, ಇಬ್ಬರು ಗಂಭೀರ

Prasthutha|

ಸುರತ್ಕಲ್: ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ಹೊಸಬೆಟ್ಟುವಿನಲ್ಲಿ ನಡೆದಿದೆ.

- Advertisement -


ಕಾರು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಪ್ರಯಾಣಿಕ ಮೊಹಮ್ಮದ್ ಫಿಜಾನ್ ಅವರ ತಲೆಯ ಒಳಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಮತ್ತೋರ್ವ ಪ್ರಯಾಣಿಕ ಅನಿರಿಧ್ ನಾಯರ್ ಅವರ ಹಣೆಯ ಮೇಲೆ ಕೂಡ ಗಾಯವಾಗಿದೆ.


ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ.

Join Whatsapp