ಮಂಗಳೂರು: ಮೋದಿ ಭಾವಚಿತ್ರಕ್ಕೆ ಸೆಗಣಿ ಎರಚಿದ ಪ್ರಕರಣ | ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ!

Prasthutha|

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಸೆಗಣಿ ಎರಚಿ ವಿರೂಪಗೊಳಿಸಿದ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಸುರತ್ಕಲ್ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ, ಆರೋಪಿಯು ಮಾನಸಿಕ ಅಸ್ವಸ್ಥನಾಗಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

- Advertisement -

ಸುರತ್ಕಲ್ ಗೋವಿಂದ ದಾಸ ಕಾಲೇಜ್ ಬಳಿ ಹಾಕಲಾಗಿದ್ದ ಬ್ಯಾನರ್ ವೊಂದರಲ್ಲಿದ್ದ ಪ್ರಧಾನಿ ಮೋದಿ ಭಾವಚಿತ್ರವನ್ನು ಅಕ್ಟೋಬರ್ 2ರ ತಡರಾತ್ರಿ ಸೆಗಣಿ ಎರಚಿ ವಿರೂಪಗೊಳಿಸಲಾಗಿತ್ತು. ಘಟನೆ ಸಂಬಂಧ ಮರುದಿನ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣವೇ ಎಚ್ಚೆತ್ತುಕೊಂಡ ಸುರತ್ಕಲ್ ಠಾಣಾ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯವನ್ನಾಧರಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಇಂದು ಪತ್ತೆ ಹಚ್ಚಿದ್ದಾರೆ. ಆದರೆ ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವುದಾಗಿ ದೃಢಪಟ್ಟ ಹಿನ್ನೆಲೆ ಆತನ ಆರೋಗ್ಯ ಸ್ಥಿತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ಒದಗಿಸಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸದೇ ಆತನನ್ನು ಬಿಡುಗಡೆಗೊಳಿಸಿದ್ದಾಗಿ ತಿಳಿದು ಬಂದಿದೆ.

Join Whatsapp