Home ಕರಾವಳಿ ಸುರತ್ಕಲ್ ಚೂರಿ ಇರಿತ ಪ್ರಕರಣ : ಆರೋಪಿಗೆ ಜಾಮೀನು

ಸುರತ್ಕಲ್ ಚೂರಿ ಇರಿತ ಪ್ರಕರಣ : ಆರೋಪಿಗೆ ಜಾಮೀನು

ಸುರತ್ಕಲ್: ಸುರತ್ಕಲ್ ಚೂರಿ ಇರಿತ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿತ್ತು. ಇದೀಗ ಆರೋಪಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದಾನೆ.

ಕಾನ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದು ಪರಾರಿಯಾಗಿದ್ದನು.

ಇದೀಗ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಶನಿವಾರ ನೀಡಿದೆ.
ಆರೋಪಿ ಪರ ವಕೀಲರಾದ ಜೀಶಾನ್ ಅಲಿ ಸುರತ್ಕಲ್ ವಾದಿಸಿದ್ದು, ತಾಜುದ್ದೀನ್ ಸಹಕರಿಸಿದ್ದರು.

Join Whatsapp
Exit mobile version