ಸುರತ್ಕಲ್ | ಬೈಕ್’ಗಳಿಗೆ ಲಾರಿ ಢಿಕ್ಕಿ: ಸವಾರರಿಬ್ಬರಿಗೆ ಗಂಭೀರ ಗಾಯ

Prasthutha|

ಸುರತ್ಕಲ್: ಲಾರಿಯೊಂದು ಬೈಕ್ ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಹಾಗೂ ಓರ್ವ ಪಾದಚಾರಿ ಮಹಿಳೆ  ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ನಡೆದಿದೆ.

- Advertisement -

ಮಂಗಳೂರಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ  ಕಂಟೈನರ್ ಅತಿಯಾದ ವೇಗದಲ್ಲಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಲ ಭಾಗದಿಂದ ಬರುತ್ತಿದ್ದ ಒಂದು ಸ್ಕೂಟಿ ಮತ್ತು ಒಂದು ಬೈಕ್ ಗೆ ಢಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp