ಸುರತ್ಕಲ್ ಜಲೀಲ್ ಹತ್ಯೆ: ಪ್ರತಿಭಟನಾ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ ಭೇಟಿ, ಆರೋಪಿಗಳ ಶೀಘ್ರ ಬಂಧನದ ಭರವಸೆ

Prasthutha|


ಮಂಗಳೂರು: ದುಷ್ಕರ್ಮಿಗಳ ಚಾಕು ಇರಿತದಿಂದ ಹತ್ಯೆಗೀಡಾದ ಸುರತ್ಕಲ್ ಕೃಷ್ಣಾಪುರದ ನಿವಾಸಿ ಜಲೀಲ್ ಅವರ ಹತ್ಯೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಸಾವಿರಾರು ಸಾರ್ವಜನಿಕರು ಭಾನುವಾರ ಜಲೀಲ್ ಅವರ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ಅನ್ನು ರಸ್ತೆಯಲ್ಲೇ ನಿಲ್ಲಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶಿತರನ್ನು ಸಮಾಧಾನಪಡಿಸಿ ಆದಷ್ಟು ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು.

- Advertisement -


ಎಲ್ಲರೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕಾರ ನೀಡಬೇಕು. ಈಗಾಗಲೇ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಬಳಿಕ ಪಾರ್ಥೀವ ಶರೀರವನ್ನು ಕೃಷ್ಣಾಪುರ ಮಸೀದಿಗೆ ಕೊಂಡೊಯ್ದು ಮಯ್ಯತ್ ನಮಾಝ್ ನಿರ್ವಹಿಸಲಾಯಿತು.

Join Whatsapp