ಸುರತ್ಕಲ್: ಯುವಕನಿಗೆ ಚೂರಿ ಇರಿತ

Prasthutha|

ಮಂಗಳೂರು: ಫಾಝಿಲ್  ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಯುವಕನೊಬ್ಬನಿಗೆ ಇಂದು ಸಂಜೆ ಚಾಕು ಇರಿದ ಘಟನೆ ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ.

- Advertisement -

ಕೃಷ್ಣಪುರ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

 ಚೂರಿ ಇರಿತಕ್ಕೆ ಒಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   

Join Whatsapp