Home ಕರಾವಳಿ ಸುರತ್ಕಲ್: ಯುವಕನಿಗೆ ಚೂರಿ ಇರಿತ

ಸುರತ್ಕಲ್: ಯುವಕನಿಗೆ ಚೂರಿ ಇರಿತ

ಮಂಗಳೂರು: ಫಾಝಿಲ್  ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಯುವಕನೊಬ್ಬನಿಗೆ ಇಂದು ಸಂಜೆ ಚಾಕು ಇರಿದ ಘಟನೆ ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ.

ಕೃಷ್ಣಪುರ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

 ಚೂರಿ ಇರಿತಕ್ಕೆ ಒಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.   

Join Whatsapp
Exit mobile version